Actor Darshan Arrest:ಕೋ ಲೆ ಪ್ರಕರಣದಲ್ಲಿ ನಟ ದರ್ಶನ್ ಪೊಲೀಸ್ ಕಸ್ಟಡಿಗೆ!

By Sandeep Kumar. B

Published on:

Actor Darshan Arrest :ಕೋ ಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಇಂದು ಬೆಳಗ್ಗೆ ಮೈಸೂರಿನ ಫಾರ್ಮ್‌ಹೌಸ್‌ನಿಂದ ನಟ ದರ್ಶನ್ ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿರುವುದು ಮಾಧ್ಯಮಗಳಲ್ಲಿ ಟ್ರೆಂಡಿಂಗ್ ಆಗಿದೆ. ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಆಯುಕ್ತ ದಯಾನಂದ್ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ.

Actor Darshan Arrest

ಎರಡು ದಿನಗಳ ಹಿಂದೆ ಸೋಮನಹಳ್ಳಿ ಸೇತುವೆ ಬಳಿ ಅಪರಿಚಿತ ಶವ ಪತ್ತೆಯಾದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟನನ್ನು ಬಂಧಿಸಲಾಗಿತ್ತು. ಈ ಕುರಿತು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಅದೇ ಘಟನೆಗೆ ಸಂಬಂಧಿಸಿದಂತೆ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಪ್ರಕರಣದ ಕುರಿತು ಶೀಘ್ರವೇ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಬೆಂಗಳೂರಿನಲ್ಲಿ ಕೊಲೆಯಾದವರು. ಅವರು ಚಿತ್ರದುರ್ಗದ ಲಕ್ಷ್ಮಿ ವೆಂಕಟೇಶ್ವರ ಬಡಾವಣೆಯಲ್ಲಿ ವಾಸಿಸುತ್ತಿದ್ದರು ಮತ್ತು ಅಪೋಲೋ ಮೆಡಿಕಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಮನೆಯಿಂದ ಹೋದವರು ವಾಪಸ್ ಬಂದಿಲ್ಲ.

Actor Darshan
Actor Darshan

ಜೂನ್ 9 ರಂದು ರೇಣುಕಾ ಸ್ವಾಮಿ ಕೊ ಲೆಯಾಗಿದ್ದರು. ಈ ಪ್ರಕರಣದ ಆರೋಪಿಗಳ
ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಆರೋಪಿಗಳು ದರ್ಶನ್ ಹೆಸರನ್ನು ಬಹಿರಂಗಪಡಿಸಿದ್ದಾರೆ.ನಟಿ ಪವಿತ್ರ ಗೌಡಗೆ ರೇಣುಕಸ್ವಾಮಿ ಕೆಟ್ಟದಾಗಿ ಮೆಸೇಜ್ ಮಾಡಿದ್ದಕ್ಕೆ ಅಪಹರಿಸಿ ಕಿಡ್ನ್ಯಾಪ್ ಮಾಡಿ ಬರ್ಬರವಾಗಿ ಕೊ ಲೆ ಮಾಡಲಾಗಿದೆ ಎನ್ನಲಾಗಿದೆ.

Read More

Yuva Divorce: ಯುವ ವಿಚ್ಛೇದನದ ಹಿಂದೆ ಇದ್ದಾರೆ ಕನ್ನಡದ ಖ್ಯಾತ ನಟಿ !

Chandan and Niveditha:ಚಂದನ್ ಶೆಟ್ಟಿಯಿಂದ ನಿವೇದಿತಾ ಗೌಡ ಪಡೆದ ಜೀವನಾಂಶ ಎಷ್ಟು ಕೋಟಿ ಗೊತ್ತಾ?

Sandeep Kumar. B

Leave a Comment