ಪುನೀತ್ ರಾಜ್‌ಕುಮಾರ್ ಹೆಸರು ಹೇಳಿಕೊಂಡು ಅನುಶ್ರೀ ಕ್ಯಾಮರಾ ಮುಂದೆ ಓವರ್ ಆಕ್ಟಿಂಗ್ ಮಾಡುತ್ತಾಳೆ ಎಂದು ಆಕ್ರೋಶ ವ್ಯಕ್ತ ಪಡಿಸಿದ ವೀಕ್ಷಕರು

ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕನ್ನಡ ಚಿತ್ರರಂಗದ ಹಾಗೂ ಕಿರುತೆರೆಯ ಯಾವುದೇ ಕಾರ್ಯಕ್ರಮಗಳು ನಡೆಯಲಿ ಅಲ್ಲಿ ಯಾರು ಬರುತ್ತಾರೆ ಇಲ್ಲವೋ ಗೊತ್ತಿಲ್ಲ ಆದರೆ ನಿರೂಪಕಿಯಾಗಿ ಆಂಕರ್ ಅನುಶ್ರೀ ಖಂಡಿತವಾಗಿ ಇದ್ದೇ ಇರುತ್ತಾರೆ ಎಂಬ ಮಾತು ಚಿತ್ರರಂಗದಲ್ಲಿ ಹಲವಾರು ವರ್ಷಗಳಿಂದ ಕೇಳಿ ಬರುತ್ತಿದೆ. ಅನುಶ್ರೀ ಅವರು ಕನ್ನಡ ಚಿತ್ರರಂಗದ ಟಾಪ್ ಆಂಕರ್ ಆಗಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

ಕರಾವಳಿ ಮೂಲದಿಂದ ಬೆಂಗಳೂರಿಗೆ ಬಂದು ಬೆಂಗಳೂರಿನಲ್ಲಿ ಬೆಂಗಳೂರು ಕನ್ನಡವನ್ನು ಕಷ್ಟದಿಂದ ಕಲಿತು ಈಗ ಅವರು ಮಾತನಾಡುವ ಶೈಲಿಯಿಂದ ಹಲವಾರು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ ಎಂದರೆ ತಪ್ಪಾಗಲಾರದು. ಕೇವಲ ಎಷ್ಟು ಮಾತ್ರವಲ್ಲದೆ ಕನ್ನಡ ಚಿತ್ರರಂಗದ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ನಿರೂಪಕಿಯಾಗಿ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ಕನ್ನಡ ಚಿತ್ರರಂಗದ ಯಾವುದೇ ಪ್ರತಿಷ್ಠಿತ ಕಾರ್ಯಕ್ರಮಗಳು ನಡೆಯಲಿ ಅಲ್ಲಿ ನಿರೂಪಕಿಯಾಗಿ ಕಾರ್ಯಕ್ರಮವನ್ನು ಅನುಶ್ರೀ ಅವರೇ ನಡೆಸಿಕೊಡಬೇಕು ಎನ್ನುವ ಅಲಿಖಿತ ನಿಯಮವಿದೆ.

ಇಷ್ಟೆಲ್ಲ ವಿಚಾರದ ನಂತರ ಅವರು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ದೊಡ್ಡ ಅಭಿಮಾನಿ ಎಂಬುದು ಕೂಡ ಎಲ್ಲರಿಗೂ ತಿಳಿದಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಇನ್ನು ಇತ್ತೀಚಿಗೆ ನೆಟ್ಟಿಗರು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ವಿಚಾರದಲ್ಲಿ ಆಂಕರ್ ಅನುಶ್ರೀ ಅವರನ್ನು ಸಾಕಷ್ಟು ಟೀಕೆ ಮಾಡುತ್ತಿದ್ದಾರೆ ಎಂಬುದಾಗಿ ಕೂಡ ಬಹಿರಂಗವಾಗಿದೆ.

https://youtu.be/HiTeXrVzwsk

ಗಂಧದ ಗುಡಿ ಸಿನಿಮಾ ವನ್ನು ನೋಡಿದ ನಂತರ ಮಾಧ್ಯಮಗಳ ಮುಂದೆ ಬಂದ ಅನುಶ್ರೀ ಅವರು ಸಾಕಷ್ಟು ಭಾವುಕರಾಗಿ ಮಾತನಾಡಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು ಇದನ್ನು ನೋಡಿರುವ ನೆಟ್ಟಿಗರು ಸಾಕಮ್ಮ ಓವರ್ ಆಕ್ಟಿಂಗ್ ಮಾಡಬೇಡ ಎಂಬುದಾಗಿ ಸೋಶಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡಲು ಪ್ರಾರಂಭಿಸಿದ್ದಾರೆ. ಆಂಕರ್ ಅನುಶ್ರೀ ಅವರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಈ ರೀತಿ ಕಾಮೆಂಟ್ ಮಾಡುತ್ತಿರುವ ನೆಟ್ಟಿಗರ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ.

Leave a Comment

error: Content is protected !!