ದರ್ಶನ್ ಮೇಲೆ ಚಪ್ಪಲಿ ಎಸೆತ ಅಶ್ವಿನಿ ಪುನೀತ್ ರಾಜಕುಮಾರ್ ನೀಡಿದ ಮೊದಲ ಪ್ರತಿಕ್ರಿಯೆ ಏನು ಗೊತ್ತಾ?

Ashwini puneeth rajkumar about darshan : ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕ್ರಾಂತಿ (kranti cinema) ಸಿನಿಮಾದ ಮೊದಲ ಸಾಂಗ್ ಮೈಸೂರಿನಲ್ಲಿ ಬಿಡುಗಡೆಯಾಗಿತ್ತು ಹಾಗೂ ಎರಡನೇ ಸಾಂಗ್ ಬಳ್ಳಾರಿಯ ಹೊಸಪೇಟೆಯ ವಾಲ್ಮೀಕಿ ಸರ್ಕಲ್ ನಲ್ಲಿ ಬಿಡುಗಡೆಯಾಗಿದೆ. ಆದರೆ ಈ ಸಂದರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಎನ್ನಲಾಗಿರುವ ವ್ಯಕ್ತಿಗಳು ದರ್ಶನ್ ಅವರ ಮೇಲೆ ಚಪ್ಪಲಿ ಎಸೆದು ಅವಮಾನ ಮಾಡಿದ್ದಾರೆ. ಇದು ಈಗಾಗಲೇ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದ್ದು ಇಡೀ ಕರ್ನಾಟಕ ರಾಜ್ಯದಲ್ಲಿಯೇ ದರ್ಶನ್ ಅಭಿಮಾನಿಗಳು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

ಕನ್ನಡ ಚಿತ್ರರಂಗದ ಸ್ಟಾರ್ ನಟರು ಕೂಡ ದರ್ಶನ್ ಅವರ ವಿರುದ್ಧ ನಡೆದಿರುವ ಈ ಕೃತ್ಯಕ್ಕೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ ದರ್ಶನ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ಅವರಲ್ಲಿ ಸ್ವತಹ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸಹೋದರ ಆಗಿರುವ ಕರುನಾಡ ಚಕ್ರವರ್ತಿ ಶಿವಣ್ಣ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸೇರಿದಂತೆ ಹಲವಾರು ಗಣ್ಯಾತಿಗಣ್ಯ ನಟರು ಕೂಡ ಸೇರಿದ್ದಾರೆ. ಇಂತಹ ಕಾರ್ಯ ನಿಜಕ್ಕೂ ಕೂಡ ಕ್ಷಮಾರ್ಹವಲ್ಲ ಎಂಬುದಾಗಿ ಎಲ್ಲರೂ ಕೂಡ ಕೋಪೋದ್ರಿಕ್ತರಾಗಿದ್ದಾರೆ.

Ashwini puneeth rajkumar about darshan

ಇನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಹೊಸಪೇಟೆಯಲ್ಲಿ ನಡೆದಿರುವ ಈ ಅವಮಾನದ ಕುರಿತಂತೆ, ದೊಡ್ಡ ಮನೆಯ ಸೊಸೆ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಪತ್ನಿ ಆಗಿರುವ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಕೂಡ ಪ್ರತಿಕ್ರಿಯೆ ನೀಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅಷ್ಟಕ್ಕೂ ಈ ಘಟನೆಯ ಕುರಿತಂತೆ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಏನು ಹೇಳಿದ್ದಾರೆ ಎಂಬುದಾಗಿ ಸಂಪೂರ್ಣ ವಿವರವಾಗಿ ತಿಳಿದುಕೊಳ್ಳೋಣ ಬನ್ನಿ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅದ್ಭುತ ವ್ಯಕ್ತಿತ್ವವನ್ನು ಹೊಂದಿರುವ ಒಳ್ಳೆಯ ಮನಸ್ಸಿನ ವ್ಯಕ್ತಿ. ಚಿತ್ರರಂಗದಲ್ಲಿ 25 ವರ್ಷ ಕಾಲ ಕಲಾ ಸೇವೆಯನ್ನು ನೀಡಿ ಕನ್ನಡ ಚಿತ್ರರಂಗ ಬೆಳೆಯುವಲ್ಲಿ ಕೊಡುಗೆಯನ್ನು ನೀಡಿರುವ ನಟ. ಅವರಿಗೆ ಈ ರೀತಿ ಮಾಡಿರುವುದು ನಿಜಕ್ಕೂ ಕೂಡ ಬೇಸರವನ್ನು ತರಿಸಿದೆ ಹೀಗೆ ಮಾಡಬಾರದಾಗಿತ್ತು ಎಂಬುದಾಗಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಎಂಬುದಾಗಿ ತಿಳಿದು ಬಂದಿದ್ದು ಎಲ್ಲರೂ ಕೂಡ ಅಶ್ವಿನಿ ಪುನೀತ್ ರಾಜಕುಮಾರ್ ಅವರ ಈ ಮಾತುಗಳಿಗೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ. ದರ್ಶನ್ ಅವರಿಗೆ ಈ ರೀತಿ ಅವಮಾನ ಮಾಡಿದವರನ್ನು ಆದಷ್ಟು ಶೀಘ್ರವಾಗಿ ಬಂಧಿಸಬೇಕು ಎಂಬುದಾಗಿ ರಾಜ್ಯಾದ್ಯಂತ ಅಭಿಮಾನಿಗಳು ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡಿದ್ದಾರೆ.

Leave a Comment

error: Content is protected !!