ಡಿ ಬಾಸ್ ನಿಜಕ್ಕೂ ಅಪ್ಪು ಸಮಾಧಿ ಬಳಿ ಹೋಗಿದ್ರಾ? ಕೊನೆಗೂ ಭಯಲಾಯಿತು ನೋಡಿ ನಿಜವಾದ ರಹಸ್ಯ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಮೊದಲಿನಿಂದಲೂ ಕೂಡ ಆಪ್ತ ಸ್ನೇಹಿತರು ಎಂಬುದು ಇಡೀ ಕನ್ನಡ ಚಿತ್ರರಂಗಕ್ಕೆ ಗೊತ್ತಿರುವ ಸತ್ಯ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಟನೆಯ ಅರಸು ಸಿನಿಮಾದಲ್ಲಿ ಅತಿಥಿ ಪಾತ್ರಕ್ಕಾಗಿ ನಟಿಸಲು ಒಂದು ರೂಪಾಯಿ ಸಂಭಾವನೆಯನ್ನು ಕೂಡ ಪಡೆದಿಲ್ಲ ಎಂಬುದನ್ನು ಸ್ವತಃ ರಾಘಣ್ಣ ಅವರೇ ಎಲ್ಲರಿಗೂ ಹೇಳಿದ್ದರು ಅಷ್ಟರಮಟ್ಟಿಗೆ ಅಪ್ಪು ಹಾಗೂ ದಚ್ಚು ನಡುವೆ ಸ್ನೇಹ ಗಾಢವಾಗಿತ್ತು.

ಇನ್ನು ಇತ್ತೀಚಿಗಷ್ಟೇ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಪುನೀತಪರ್ವ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕಾಣಿಸಿಕೊಂಡಿಲ್ಲ ಎಂಬುದಾಗಿ ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿತ್ತು. ಇದು ಬಹುತೇಕ ಅಪ್ಪು ಅಭಿಮಾನಿಗಳಿಗೆ ಅಸಮಾಧಾನವನ್ನು ಹಾಗೂ ಬೇಸರವನ್ನು ಮೂಡಿಸಿತು ಎಂದರೆ ತಪ್ಪಾಗಲಾರದು. ಹೀಗಿದ್ದರೂ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಅದಾದ ನಂತರ ಪುನೀತ್ ರಾಜಕುಮಾರ್ ಅವರ ಸಮಾಧಿಗೆ ಡಿ ಬಾಸ್ ಹೋಗಿ ಬಂದಿದ್ದರು ಎಂಬುದಾಗಿ ಸುದ್ದಿಯಾಗಿತ್ತು.

ಈಗ ಎಲ್ಲಾ ಕಡೆ ಹುಡುಕಾಟ ಮಾಡಿದ ನಂತರ ಆ ವಿಚಾರದ ಬಗ್ಗೆಯೂ ಕೂಡ ಸತ್ಯಾಂಶ ಹೊರಬಂದಿದೆ. ಹೌದು ಮಿತ್ರರೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸಮಾಧಿಯ ಬಳಿಗೆ ಹೋಗಿ ಬಂದಿಲ್ಲ ಎಂಬುದಾಗಿ ತಿಳಿದು ಬಂದಿದೆ. ಇನ್ನು ನಿಮಗೆಲ್ಲ ತಿಳಿದಿರುವಂತೆ ಸೋಶಿಯಲ್ ಮೀಡಿಯಾದಲ್ಲಿ ಅಪ್ಪು ಹಾಗೂ ದಚ್ಚು ಅಭಿಮಾನಿಗಳ ನಡುವೆ ಹಗ್ಗ ಜಗ್ಗಾಟ ನಡೆಯುತ್ತಲೇ ಇದೆ.

ಸದ್ಯಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 56ನೇ ಸಿನಿಮಾದ ಚಿತ್ರೀಕರಣ ನಡೆಯುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಕೂಡ ಚಿತ್ರೀಕರಣದಲ್ಲಿ ನಿರತರಾಗಿರುವ ಹಿನ್ನೆಲೆಯಲ್ಲಿ ಅಪ್ಪು ಸಮಾಧಿಯ ಬಳಿಗೆ ಹೋಗಿ ಬರಲು ಸಾಧ್ಯವಾಗಿಲ್ಲ ಎಂಬುದಾಗಿ ತಿಳಿದು ಬಂದಿದೆ. ಮುಂದಿನ ದಿನಗಳಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಬಿಡುವು ಮಾಡಿಕೊಂಡು ಅಪ್ಪು ಸಮಾಧಿಯ ಬಳಿ ಹೋಗಿ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬುದಾಗಿ ಆಪ್ತ ಮೂಲಗಳು ತಿಳಿಸಿವೆ.

Leave a Comment

error: Content is protected !!