Darshan Thoogudeepa: ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕಳೆದ ಮೂರು ವರ್ಷಗಳಿಂದ ಅಭಿಮಾನಿಗಳ ಜೊತೆಗೆ ಬರ್ತಡೆಯನ್ನು ಆಚರಿಸಿಕೊಂಡಿರಲಿಲ್ಲ. ಎರಡು ವರ್ಷಗಳಿಂದ ಲಾಕ್ಡೌನ್ ಇರುವ ಕಾರಣದಿಂದಾಗಿ ಹಾಗೂ ಒಂದು ವರ್ಷ ಪವರ್ ಸ್ಟಾರ್ ಪುನೀತ್ ರಾಜಕುಮಾರ್(Puneeth Rajkumar) ಅವರ ಮರಣದ ಕಾರಣದಿಂದಾಗಿ ಬರ್ತಡೇ ಯನ್ನು ಆಚರಿಸಿಕೊಂಡಿರಲಿಲ್ಲ. ಆದರೆ ಈ ವರ್ಷ ಫೆಬ್ರವರಿ 16ರಂದು ಕೊನೆಗೂ ಮೂರು ವರ್ಷಗಳ ಕಾಯುವಿಕೆಯ ನಂತರ ಡಿ ಬಾಸ್ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆಗೆ ಆಚರಿಸಿಕೊಂಡಿದ್ದಾರೆ.
ಹೌದು ಗೆಳೆಯರೇ, ರಾಜರಾಜೇಶ್ವರಿ ನಗರದ ಚಾಲೆಂಜಿಂಗ್ ಸ್ಟಾರ್ ದರ್ಶನ್(Challenging Star Darshan) ಅವರ ನಿವಾಸದ ಎದುರುಗಡೆ ಸಾವಿರಾರು ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ದಿನವಿಡೀ ಅವರ ಜೊತೆಗೆ ನಿಂತು ಕೈಕುಲಕಿ ಅಭಿಮಾನಿಗಳಿಂದ ಜನ್ಮದಿನದ ಶುಭಾಶಯಗಳನ್ನು ಪಡೆದುಕೊಂಡಿದ್ದಾರೆ. ಅಭಿಮಾನಿಗಳು ದರ್ಶನ್ ಅವರ ಬರ್ತಡೆಗೆ ಆಶ್ರಮ ಹಾಗೂ ಮಠಗಳಿಗೆ ನೀಡಲು ಮೂಟೆ ಮೂಟೆ ಅಕ್ಕಿ ಸೇರಿದಂತೆ ದವಸ ಧಾನ್ಯಗಳನ್ನು ತಂದು ಡಿ ಬಾಸ್ ರವರಿಗೆ ನೀಡಿದ್ದಾರೆ.
ಒಟ್ಟಾರೆಯಾಗಿ ಆ ಒಂದು ದಿನ ಎನ್ನುವುದು ಆ ಸುತ್ತಮುತ್ತಲಿನ ಪ್ರದೇಶ ಎನ್ನುವುದು ಹಬ್ಬದಂತೆ ಕಂಡುಬಂದಿತು ಎಂದರೆ ತಪ್ಪಾಗಲಾರದು. ಇನ್ನು ಈ ಸಂದರ್ಭದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ರವರ ಬರ್ತಡೆಯ ಪ್ರಯುಕ್ತವಾಗಿ ಬಂದಂತಹ ಅಭಿಮಾನಿಗಳಿಗೆ ಊಟದ ವ್ಯವಸ್ಥೆಯನ್ನು ಕೂಡ ಮಾಡಲಾಗಿದ್ದು ಇದಕ್ಕೆ ಖರ್ಚಾಗಿರುವ ಹಣವನ್ನು ಕೇಳಿದರೆ ಖಂಡಿತವಾಗಿ ನೀವು ಕೂಡ ಬೆಕ್ಕಸ ಬೆರಗಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಹೌದು ಗೆಳೆಯರೆ ಭರ್ಜರಿ ನಾಲ್ಕು ಕೋಟಿಗೂ ಅಧಿಕ ಖರ್ಚಾಗಿದೆ ಎಂಬುದಾಗಿ ತಿಳಿದು ಬಂದಿದೆ.
ಹೌದು ಗೆಳೆಯರೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜನ್ಮದಿನದ ಪ್ರಯುಕ್ತವಾಗಿ ನಡೆದಿರುವಂತಹ ಈ ಅನ್ನಸಂತರ್ಪಣೆಯಲ್ಲಿ ನಾಲ್ಕು ಕೋಟಿಗೂ ಅಧಿಕ ಖರ್ಚಾಗಿದ್ದು ಇದನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ನಾನೇ ಕೊಡುತ್ತೇನೆ ಎಂಬುದಾಗಿ ಹೇಳಿದರೂ ಕೂಡ ಕೇಳದೆ ಅಭಿಮಾನಿಗಳ ಖರ್ಚು ಹಾಕಿಕೊಂಡು ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇಂತಹ ಅಭಿಮಾನಿಗಳನ್ನು ಪಡೆದ ಚಾಲೆಂಜಿಂಗ್ ಸ್ಟಾರ್ ಧನ್ಯರು ಎಂದು ಹೇಳಬಹುದು.