ಅಪ್ಪು ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಬಂದಿದ್ದ ರಜನಿ ಕಾಂತ್ ಮತ್ತು ಜೂನಿಯರ್ ಎನ್ ಟಿ ಆರ್ ಪಡೆದ ಸಂಭಾವನೆ ಎಷ್ಟು ಗೊತ್ತಾ?

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಮ್ಮನ್ನೆಲ್ಲ ಆಗಲಿ ಈಗಾಗಲೇ ಒಂದು ವರ್ಷ ಆಗಿದ್ದು ಇದೇ ಸಂದರ್ಭದಲ್ಲಿ ಅವರಿಗೆ ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ನೀಡುವಂತಹ ಅತ್ಯುನ್ನತ ಗೌರವ ಆಗಿರುವ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿ ಪುರಸ್ಕರಿಸಿ ಗೌರವಿಸಲಾಗಿದೆ. ಈ ಗೌರವವನ್ನು ಪಡೆದಿರುವ ಕೆಲವೇ ಕೆಲವು ಹೆಮ್ಮೆಯ ಕನ್ನಡಿಗರಲ್ಲಿ ಪುನೀತ್ ರಾಜಕುಮಾರ್ ಅವರ ಹೆಸರು ಕೂಡ ಶಾಮಿಲಾಗಿದೆ.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕನ್ನಡ ಚಿತ್ರರಂಗ ಹಾಗೂ ಸಾಮಾಜಿಕ ಸೇವೆಗಳಲ್ಲಿ ಕಂಡುಬಂದಂತಹ ಕೊಡುಗೆಯನ್ನು ಗಮನಿಸಿ ಗೌರವಿಸಿ ರಾಜ್ಯ ಸರ್ಕಾರ ಈ ಪುರಸ್ಕಾರವನ್ನು ನೀಡಿದೆ. ಅದು ಕೂಡ ನವೆಂಬರ್ ಒಂದರಂದು ಕನ್ನಡ ರಾಜ್ಯೋತ್ಸವದ ದಿನದಂದೇ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ನೀಡಿ ಗೌರವಿಸಿ ಪುನೀತ್ ರಾಜಕುಮಾರ್ ಅವರ ಅರ್ಥಪೂರ್ಣವಾದ ಜೀವನವನ್ನು ಆಚರಿಸಲಾಯಿತು.

ಇನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವ ಈ ಸುಂದರ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ತೆಲುಗು ಚಿತ್ರರಂಗದ ಯಂಗ್ ಟೈಗರ್ ಜೂನಿಯರ್ ಎನ್ಟಿಆರ್ ಅವರನ್ನು ಪ್ರಮುಖ ಅತಿಥಿಗಳನ್ನಾಗಿ ಕರೆಸಲಾಯಿತು. ಇಬ್ಬರೂ ಕೂಡ ಕಾರ್ಯಕ್ರಮಕ್ಕೆ ಬಂದು ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡುತ್ತಾರೆ. ಇನ್ನು ಈ ಕಾರ್ಯಕ್ರಮಕ್ಕೆ ಬರಲು ಇವರಿಬ್ಬರು ಎಷ್ಟು ಸಂಭಾವನೆಯನ್ನು ಪಡೆದುಕೊಂಡಿದ್ದಾರೆ ಎಂಬ ಕುರಿತಂತೆ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿದೆ.

ಆದರೆ ಅದು ನಿಜಕ್ಕೂ ಕೂಡ ಶುದ್ಧ ಸುಳ್ಳು ಎಂದು ಹೇಳಬಹುದಾಗಿದೆ ಯಾಕೆಂದರೆ ರಜನಿಕಾಂತ್ ಹಾಗು ಜೂನಿಯರ್ ಎನ್ಟಿಆರ್ ಇಬ್ಬರೂ ಕೂಡ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಚಿಕ್ಕ ವಯಸ್ಸಿನಿಂದಲೂ ಕೂಡ ಅತ್ಯಂತ ಆಪ್ತ ವರ್ಗಕ್ಕೆ ಸೇರಿದವರಾಗಿದ್ದಾರೆ. ಇಬ್ಬರಂದಿಗೂ ಕೂಡ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಆತ್ಮೀಯ ಸಂಬಂಧವನ್ನು ಹೊಂದಿದ್ದಾರೆ ಹೀಗಾಗಿ ಯಾವುದೇ ಸಂಭವನ ಇಲ್ಲದೆ ಕೇವಲ ಅಪ್ಪು ಅವರ ಮೇಲಿನ ಪ್ರೀತಿಗಾಗಿ ಜೂನಿಯರ್ ಎನ್ಟಿಆರ್ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ರವರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

Leave a Comment

error: Content is protected !!