Crazy Star Ravichandran ಕನ್ನಡ ಚಿತ್ರರಂಗದ ಕನಸುಗಾರ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ತಮ್ಮ ತಂದೆ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಆಗಿರುವ ವೀರಸ್ವಾಮಿ ಅವರ ಬೆಂಬಲದಿಂದಲೇ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿರಬಹುದು ಆದರೆ ಕನ್ನಡ ಚಿತ್ರರಂಗದಲ್ಲಿ ಜನರು ಅವರನ್ನು ಮಿಂಚಿ ಮೆರೆಸಿದ್ದು ಮಾತ್ರ ಅವರ ಪ್ರತಿಭೆಯನ್ನು ಗುರುತಿಸಿ. ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದ ಲವರ್ ಬಾಯ್ ಫೆವರೇಟ್ ಪಾತ್ರಗಳನ್ನು ಮಾಡುತ್ತಿದ್ದ ರವಿಚಂದ್ರನ್(Ravichandran) ಅವರು ಎಲ್ಲರ ಅಚ್ಚುಮೆಚ್ಚಿನ ನಟ ಆಗಿದ್ದರು ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದರೆ ತಪ್ಪಾಗಲಾರದು.
ನಟನಾಗಿ ನಿರ್ಮಾಪಕನಾಗಿ ನಿರ್ದೇಶಕನಾಗಿ ಕೂಡ ರವಿಚಂದ್ರನ್(V Ravichandran) ಅವರು ಈಗಾಗಲೇ ಹತ್ತು ಹಲವಾರು ಸಿನಿಮಾಗಳಲ್ಲಿ ಯಶಸ್ಸನ್ನು ಪಡೆದುಕೊಂಡಿದ್ದು ಕನ್ನಡ ಚಿತ್ರರಂಗದ ಫಿಲಂ ಮೇಕರ್ ಗಳಿಗೆ ಕೋಟ್ಯಾಂತರ ರೂಪಾಯಿ ಬಜೆಟ್ ಹಾಕಿ ದೊಡ್ಡ ಮಟ್ಟದ ಸಿನಿಮಾಗಳನ್ನು ಮಾಡುವಂತಹ ಕನಸನ್ನು ತೋರಿಸಿದವರೇ ನಮ್ಮೆಲ್ಲರ ನೆಚ್ಚಿನ ಕ್ರೇಜಿಸ್ಟಾರ್ ರವಿಚಂದ್ರನ್ ಎಂದು ಹೇಳಬಹುದಾಗಿದೆ. ಪರಭಾಷಿಗರನ್ನು ಕೂಡ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದವರು.
ಆದರೆ ಇತ್ತೀಚಿನ ದಿನಗಳಲ್ಲಿ ರವಿಚಂದ್ರನ್ ಅವರು ನಿರ್ಮಿಸುತ್ತಿರುವ ಹಾಗೂ ನಟಿಸುತ್ತಿರುವ ಬಹುತೇಕ ಎಲ್ಲಾ ಸಿನಿಮಾಗಳು ಕೂಡ ಕನ್ನಡ ಚಿತ್ರರಂಗದ ಬಾಕ್ಸ್ ಆಫೀಸ್ ನಲ್ಲಿ ಸೋಲುತ್ತಿದ್ದು ಸತತ ಸೋಲುಗಳಿಂದ ರವಿಚಂದ್ರನ್(Ravichandran) ಅವರು ಆರ್ಥಿಕವಾಗಿ ಕಂಗೆಟ್ಟಿದ್ದಾರೆ ಎಂದು ಹೇಳಬಹುದಾಗಿದೆ. ಇದನ್ನು ಸ್ವತಹ ಅವರೇ ರಿಯಾಲಿಟಿ ಶೋ ಕಾರ್ಯಕ್ರಮ ಒಂದರ ವೇದಿಕೆಯ ಮೇಲೆ ಕಣ್ಣೀರಿಟ್ಟು ಹೇಳಿದ್ದರು. ಹೀಗಿದ್ದರೂ ಕೂಡ ಕನ್ನಡ ಚಿತ್ರರಂಗದಲ್ಲಿ ಅವರಿಗಿರುವ ಬೇಡಿಕೆ ಕಡಿಮೆ ಆಗಿಲ್ಲ.
ಎಲ್ಲಕ್ಕಿಂತ ಪ್ರಮುಖವಾಗಿ ಸದ್ಯಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ(Action Prince Dhruva Sarja) ನಾಯಕ ನಟನಾಗಿ ನಟಿಸಿರುವ ಹಾಗೂ ಜೋಗಿ ಪ್ರೇಮ್(Jogi Prem) ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕೆಡಿ(KD) ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಅವರ ಫಸ್ಟ್ ಲುಕ್ ಕೂಡ ಈಗಾಗಲೇ ಬಿಡುಗಡೆಯಾಗಿದೆ. ಇನ್ನು ಈ ಸಿನಿಮಾದಲ್ಲಿ ನಟಿಸುವುದಕ್ಕಾಗಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಭರ್ಜರಿ ಒಂದು ಕೋಟಿ ರೂಪಾಯಿ ಸಂಭಾವನೆಯನ್ನು ಪಡೆದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಸಿನಿಮಾ ರವಿಚಂದ್ರನ್ ಹಾಗೂ ಚಿತ್ರತಂಡಕ್ಕೆ ದೊಡ್ಡ ಮಟ್ಟದ ಯಶಸ್ಸನ್ನು ನೀಡಲಿ ಎಂಬುದಾಗಿ ಹಾರೈಸೋಣ.