KGF ಅಧೀರ ಸಂಜಯ್ ದತ್- ಜೊತೆ ಚಾಲೆಂಜಿಂಗ್ ಸ್ಟಾರ್ ದರ್ಶನ್!

ಸ್ನೇಹಿತರೆ ಕಳೆದ ಕೆಲವು ವರ್ಷಗಳ ಹಿಂದೆ ಬಿಡುಗಡೆಗೊಂಡ ಪ್ರಶಾಂತ್ ನೀಲ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರ ಕಾಂಬಿನೇಷನ್ನಲ್ಲಿ ತಯಾರಾದ ಕೆಜಿಎಫ್ ಸಿನಿಮಾದ ಮೂಲಕ ಸ್ಯಾಂಡಲ್ವುಡ್ ಗೆ ಪಾದರ್ಪಣೆ ಮಾಡಿದಂತಹ ಸಂಜಯ್ ದತ್(Sanjay dutt) ಅವರು ಸದ್ಯ ಧ್ರುವ ಸರ್ಜಾ ಅವರ ಕೆಡಿ ಸಿನಿಮಾದಲ್ಲಿ ನಟಿಸುತ್ತಿದ್ದು ಇದರ ನಡುವೆ ಕನ್ನಡ ಸಿನಿಮಾರಂಗದ ಬಾಕ್ಸ್ ಆಫೀಸ್ ಸುಲ್ತಾನ ಅಭಿಮಾನಿಗಳ ಪ್ರೀತಿಯ ಒಡೆಯ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ಅವರನ್ನು ಭೇಟಿ ಮಾಡಿದ್ದಾರೆ.

ಇದನ್ನು ಅವರ ಇಡೀ ತಂಡ ಸ್ಪೆಷಲ್ ಮೀಟಿಂಗ್ ಎಂದು ಕರೆದಿದ್ದು ಇದರ ಹಿಂದಿರುವ ಕಾರಣವೇನು ದರ್ಶನ್ ಮತ್ತು ಸಂಜಯ್ ದತ್ತರವರಂತ ಘಟಾನುಗಟಿಗಳು ಯಾವ ಸಿನಿಮಾದಲ್ಲಿ ತೆರೆ ಹಂಚಿಕೊಳ್ಳಲಿದ್ದಾರೆ ಎಂಬ ಸಂಕ್ಷಿಪ್ತ ವಿವರವನ್ನು ನಾವಿವತ್ತು ಈ ಪುಟದ ಮುಖಾಂತರ ತಿಳಿಸ ಹೊರಟಿದ್ದೇವೆ. ಹೌದು ಗೆಳೆಯರೆ ನೆನ್ನೆಯಷ್ಟೇ ಖಾಸಗಿ ಹೋಟೆಲ್ ಒಂದರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ಸಂಜಯ್ ದತ್ತರವರನ್ನು ಭೇಟಿ ಮಾಡಿ ಒಟ್ಟಿಗೆ ಫೋಟೋ ತೆಗೆಸಿಕೊಂಡಿದ್ದಾರೆ.

ಈ ಫೋಟೋಗಳನ್ನು ಧ್ರುವ ಸರ್ಜಾ ಅವರ KD ಸಿನಿಮಾದ ನಿರ್ಮಾಣ ಸಂಸ್ಥೆ ಕೆವಿಎಂ ಅವರ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ದರ್ಶನ್ ಅವರು ಯಥಾಪ್ರಕಾರ ಬಹಳ ಸಿಂಪಲ್ ಆಗಿ ಬಿಳಿ ಬಣ್ಣದ ಟೀಶರ್ಟ್ ಮತ್ತು ಡಿನಿಮ್ ನಲ್ಲಿ ರಾಯಲ್ ಆಗಿ ಕಾಣಿಸಿಕೊಂಡರೆ ಸಂಜಯ್ ದತ್ ಅವರು ಹಸಿರು ಬಣ್ಣದ ಚಕ್ಸ್ ಶರ್ಟ್ ಧರಿಸಿ ಬಹಳ ರಗಡ್ ಆಗಿ ಫೋಟೋಗೆ ಪೋಸ್ ನೀಡಿದ್ದಾರೆ.

ಕಾಟೇರಾ ಸಿನಿಮಾ ಸುದ್ದಿಯಲ್ಲಿ ಇರುವಾಗಲೇ ದರ್ಶನ್‌, ಸಂಜಯ್ ದತ್ ಅವರನ್ನು ಭೇಟಿ ಮಾಡಿರುವುದು ಅಭಿಮಾನಿಗಳ ವಲಯದಲ್ಲಿ ಕುತೂಹಲವನ್ನು ಹೆಚ್ಚಿಸಿದ್ದು, ಇಬ್ಬರು ಒಟ್ಟಿಗೆ ಸಿನಿಮಾ ಮಾಡುತ್ತಿದ್ದೀರಾ ಎಂದೆಲ್ಲ ಪ್ರಶ್ನೆ ಮಾಡಿದ್ದಾರೆ. ಆದರೆ ಇದ್ಯಾವುದಕ್ಕೂ ಉತ್ತರ ದೊರಕಿಲ್ಲ. ಇನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ಮಾತ್ರವಲ್ಲದೆ ಕನ್ನಡ ಸಿನಿಮಾ ರಂಗದ ಪ್ರಸಿದ್ಧ ಕಲಾವಿದರಾದ ರಕ್ಷಿತಾ ಪ್ರೇಮ್ ಜೋಗಿ ಪ್ರೇಮ್ ಹಾಗೂ ಕೆಲ ನಿರ್ದೇಶಕ ನಿರ್ಮಾಪಕರು ಕೂಡ ವಿಶೇಷ ಸಂದರ್ಭದಲ್ಲಿ ಭಾಗಿಯಾಗಿದ್ದು,.

ಸ್ಪೆಷಲ್ ಮೊಮೆಂಟ್ಸ್(Special moments) ಎಂಬ ಕ್ಯಾಪ್ಶನ್ ಬರೆದು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದೆ ನಿರ್ಮಾಣ ಸಂಸ್ಥೆ ಅಡಿಯಲ್ಲಿ ತಯಾರಾಗುತ್ತಿರುವ ಧ್ರುವ ಸರ್ಜಾ(Druva Sarja) ಅವರ ಕೆಡಿ ಸಿನಿಮಾ ದಿನೇ ದಿನೇ ನಿರೀಕ್ಷೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದು ಸಿನಿಮಾದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಶಿಲ್ಪಾ ಶೆಟ್ಟಿ ಮತ್ತು ಸಂಜಯ್ ದತ್ತ ಸೇರಿದಂತೆ ಬಹುದೊಡ್ಡ ಅಭಿಮಾನಿ ಬಳಗವೇ ಇರಲಿದೆ.

ಶ್ರೀ ಪಂಚಮುಖಿ ಜ್ಯೋತಿಷ್ಯo ಪಂಡಿತ್ ಶ್ರೀ ಗಣೇಶ್ ಕುಮಾರ್ ಫೋನಿನ ಮೂಲಕ ಪರಿಹಾರ 9880444450 ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 600 ವರ್ಷಗಳ ಹಳೆಯ 108 ಜ್ಯೋತಿಷ್ಯ ಮಂತ್ರಗಳಿಂದ, ಮದುವೆ ಸಂತಾನ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹಶಾಂತಿ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ಹಣಕಾಸು, ವ್ಯಾಪಾರ ಉದ್ಯೋಗ, ಕೋರ್ಟ್ ಕೇಸು, ಸಾಲಬಾದೆ, ಮಾಟಬಾದೆ, ಶತೃಕಾಟ, ಸಮಸ್ಯೆಗಳಿಗೆ ಸಲಹೆ ಮತ್ತು ಪರಿಹಾರ ಶತಸಿದ್ಧ

Leave a Comment

error: Content is protected !!