Darshan: ನಟ ದರ್ಶನ್ ಜಲಿನಿಂದ ರಿಲೀಸ್ ಆಗ್ತಾರಾ? ಭವಿಷ್ಯ ನುಡಿದ ಕೌಡೇಪಿರ ಲಾಲಸಾಬ

By Sandeep Kumar. B

Published on:

Actor Darshan Thugudeepa

Darshan release in Jail Prediction: ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಸ್ಯಾಂಡಲ್’ವುಡ್ ನ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ (Darshan)ಮತ್ತು ಸಹಚರರು ಸದ್ಯಕ್ಕೆ ಜಾಮೀನಿನ ಮೇಲೆ ಬಿಡುಗಡೆ ಆಗುವ ಯಾವ ಲಕ್ಷಣಗಳೂ ಕಾಣಿಸುತ್ತಿಲ್ಲ. ನಟ ದರ್ಶನ್ ಅವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಇದ್ದಾರೆ. ಅವರಿಗೆ ಸಂತಸ ನೀಡುವ ಒಂದು ವಿಚಾರ ಹೊರ ಬಂದಿದೆ ಅದೇನು ಎಂದರೆ ಮುಂದಿನ 3 ತಿಂಗಳಲ್ಲಿ ದರ್ಶನ್ ಬಿಡುಗಡೆ ಆಗುವರು ಎನ್ನುವ ಭವಿಷ್ಯವಾಣಿ ಹೊರ ಬಂದಿದೆ.

Darshan release in Jail Prediction

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟಿ ಪವಿತ್ರ ಗೌಡ, ನಟ ದರ್ಶನ್ ಸೇರಿದಂತೆ 17 ಆರೋಪಿಗಳ ಬಂಧನವಾಗಿ ಒಂದೂವರೆ ತಿಂಗಳು ಕಳೆದಿದೆ. ಒಂದು ಕಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ, ಕಾರಣದಿಂದ ನಟ ದರ್ಶನ್ ಸೇರಿದಂತೆ ಪ್ರಕರಣದ ಬೇರೆ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ.

ಇದರಿಂದ, ಆರೋಪಿಗಳಿಗೆ ಜಾಮೀನು ಸಿಗೋದು ಅನುಮಾನ ಎಂದು ಹೇಳಲಾಗುತ್ತಿದೆ. ಮತ್ತೊಂದು ಕಡೆ ಅಭಿಮಾನಿಗಳಿಗೂ ಅವರ ಮೆಚ್ಚಿನ ನಟ ಯಾವಾಗ ಹೊರಗೆ ಬರೋದು ಎನ್ನುವ ಪ್ರಶ್ನೆ ಕಾಡುತ್ತಿದೆ. ಆದರೆ, ಇದಕ್ಕೆ ದೇವರಿಂದ ಉತ್ತರ ದೊರಕಿದೆ. ಕೊಪ್ಪಳ ಜಿಲ್ಲೆಯ ಕನಕನ ಗಿರಿಯಲ್ಲಿ ಇರುವ ಕೌಡೇಪಿರ ಲಾಲಸಾಬ ದೇವರ ಬಳಿ ಅಭಿಮಾನಿಗಳು ನಟ ದರ್ಶನ್ ಜೈಲಿನಿಂದ ಯಾವಾಗ ಬಿಡುಗಡೆ ಆಗುವರು ಎಂದು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ, ಉತ್ತರ ನೀಡಿದ ದೇವರು ಮೂರು ತಿಂಗಳಲ್ಲಿ ದರ್ಶನ್ ಹೊರಗೆ ಬರುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

Darshan VS prashanth Sambaragi
Darshan release in Jail Prediction

2019 ರಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್’ನಾ ಹಿರಿಯ ನಾಯಕ ಡಿ.ಕೆ. ಶಿವಕುಮಾರ್ ಅರೆಸ್ಟ್ ಆಗಿದ್ದರು. ಆ ಸಂದರ್ಭದಲ್ಲಿ ಕೂಡ ಕೌಡೇಪಿರ ಲಾಲಸಾಬ ದೇವರು ಭವಿಷ್ಯ ನುಡಿದಿತ್ತು. ಆ ಭವಿಷ್ಯ ನಿಜ ಕೂಡ ಆಗಿತ್ತು. ಮತ್ತೊಂದು ಬಾರಿ ದರ್ಶನ್ ವಿಚಾರವಾಗಿ ದೇವರು ಭವಿಷ್ಯ ನುಡಿದಿದ್ದು ದರ್ಶನ್ ಅಭಿಮಾನಿಗಳು ಹೆಚ್ಚು ಖುಷಿ ಪಟ್ಟಿದ್ದಾರೆ. ಕೌಡೇಪಿರ ಲಾಲಸಾಬ ದೇವರನ್ನು ಕೂರಿಸುವ ಪದ್ಧತಿ ಮುಸ್ಲಿಂ ಧರ್ಮದಲ್ಲಿ ಇದೆ. ಪ್ರತಿ ವರ್ಷವೂ ಕೊಪ್ಪಳ ಜಿಲ್ಲೆಯ ಸುತ್ತಮುತ್ತ ದೇವರ ಉತ್ಸವ ಜರುಗಲಿದ್ದು, ಭಕ್ತರು ತಂಡೋಪ ತಂಡವಾಗಿ ಆಗಮಿಸಿ ದೇವರಲ್ಲಿ ಪ್ರಾರ್ಥನೆ ಮಾಡುವರು.

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ನಟ ದರ್ಶನ್ ಮತ್ತು ಸಹಚರರಿಗೆ ಸದ್ಯಕ್ಕೆ ಜಾಮೀನು ಸಿಗುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್ 14 ದಿನಗಳ ಕಾಲ ವಿಸ್ತರಿಸಿದ್ದು ದಾಸನ ಗ್ಯಾಂಗ್ ಆಗಸ್ಟ್ ತಿಂಗಳ 1 ನೇ ತಾರೀಖಿನ ತನಕ ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆಯುವುದು ಅನಿವಾರ್ಯವಾಗಿದೆ. ಭವಿಷ್ಯವಾಣಿಯನ್ನು ಕೇಳಿದ ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳು ಮಾತ್ರ ಫುಲ್ ದಿಲ್ ಖುಷ್ ಆಗಿದ್ದಾರೆ.

Read More:

Sandeep Kumar. B

Leave a Comment