Umapathy Srinivas Gowda ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಉಮಾಪತಿ ಶ್ರೀನಿವಾಸ ಗೌಡ(Umapathy) ಅವರು ಕೇವಲ ರಾಜಕಾರಣಿ ಮಾತ್ರವಲ್ಲದೆ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕರು ಕೂಡ ಹೌದು ಎನ್ನುವುದನ್ನು ಪ್ರತಿಯೊಬ್ಬರು ನೆನಪಿನಲ್ಲಿ ಇಟ್ಟುಕೊಳ್ಳಬೇಕಾಗಿದೆ. ಈಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ರವರ ರಾಬರ್ಟ್ ಸೇರಿದಂತೆ ಕಿಚ್ಚ ಸುದೀಪ್(Kiccha Sudeep) ರವರ ಹೆಬ್ಬುಲಿ ಸಿನಿಮಾ ವನ್ನು ಕೂಡ ಅವರೇ ನಿರ್ಮಿಸಿದ್ದಾರೆ.
ಸಿನಿಮಾದಿಂದ ಈಗಾಗಲೇ ಈ ಬಾರಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತಿದ್ದ ಉಮಾಪತಿ ಶ್ರೀನಿವಾಸಗೌಡ(Umapathy Srinivas Gowda) ಅವರು ಈಗಾಗಲೇ ಸೋತಿರುವುದು ನಿಮಗೆಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಆದರೆ ಅವರ ಪಕ್ಷ ಕಾಂಗ್ರೆಸ್ ಮಾತ್ರ ಈ ಬಾರಿ ಅಧಿಕಾರವಿಧವಾಗಿ ಚುನಾವಣೆಯನ್ನು ಗೆಲ್ಲುವ ಮೂಲಕ ಕರ್ನಾಟಕದ ಚುಕ್ಕಾಣಿಯನ್ನು ತನ್ನ ಕೈಗೆ ತೆಗೆದುಕೊಂಡಿದೆ.
ಸದ್ಯಕ್ಕೆ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಗೆದ್ದಿರಬಹುದು ಆದರೆ ಯಾರು ಮುಖ್ಯಮಂತ್ರಿ ಆಗಲಿದ್ದಾರೆ ಎನ್ನುವ ಕುರಿತಂತೆ ಸಾಕಷ್ಟು ಗೊಂದಲಗಳು ಎದ್ದು ನಿಂತಿವೆ. ಒಂದು ಬಣ ಸಿದ್ದರಾಮಯ್ಯ(Siddharamaiah) ಅವರು ಮುಖ್ಯಮಂತ್ರಿ ಆಗಬೇಕು ಎನ್ನುವುದಾಗಿ ಹೇಳುತ್ತಿದ್ದಾರೆ ಇನ್ನೊಂದು ಬಣ ಡಿಕೆ ಶಿವಕುಮಾರ್(DK Shivakumar) ಅವರು ರಾಜ್ಯದ ಮುಖ್ಯಮಂತ್ರಿ ಆಗಿ ಆಯ್ಕೆ ಆಗಲಿ ಎಂದು ಬಯಸುತ್ತಿದೆ.
ಆದರೆ ಉಮಾಪತಿ ಶ್ರೀನಿವಾಸಗೌಡರವರು ತಮ್ಮ ಒಕ್ಕಲಿಗ ಸಮುದಾಯದ ಡಿಕೆ ಶಿವಕುಮಾರ್ ಅವರ ನಾಯಕರಾಗಿ ಮುಖ್ಯಮಂತ್ರಿ ಆಗಿ ಆಯ್ಕೆ ಆಗಬೇಕು ಎಂಬುದಾಗಿ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ಈ ಬಗ್ಗೆ ನಿಮ್ಮ ಅಭಿಪ್ರಾಯಗಳೇನು ಎಂಬುದನ್ನು ತಪ್ಪದೆ ಕಾಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡುವ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ.